
ಹಾವೇರಿ : ನಗರದಲ್ಲಿ ಇಂದು ವ್ಯಾಪಾಕ ಗಾಳಿ ಮತ್ತು ಮಳೆಗೆ ಮರಗಳು ಹಾಗೂ ವಿದ್ಯುತ್ ಕಂಬಗಳು ನೆಲೆಕ್ಕೆ ಊರಳಿ ಜನ ಜೀವನ ಅಸ್ತವ್ಯಸ್ಥ ವಾಗಿರುವ ಬಗ್ಗೆ ಮಾಹಿತಿ ತಿಳಿದು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶಿವಾನಂದ ಪಾಟೀಲ್ ರವರು ಕೂಡಲೇ ಜಿಲ್ಲಾಧಿಕಾರಿಗಳು, ಹೆಸ್ಕಾಂ ಅಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಕರೆ ಮಾಡಿ ಮಳೆಯಿಂದ ಆಗಿರುವ ಅವ್ಯವಸ್ಥೆ ಗಳನ್ನು ಸರಿಪಡಿಸಿ ಆಗಬಹುದಾದ ಅನಾಹುತವನ್ನು ತಪ್ಪಿಸಲು ಎಲ್ಲ ರೀತಿಯಿಂದಲೂ ಕ್ರಮವಹಿಸಿ ಸಾರ್ವಜನಿಕರಿಗೆ ಯಾವುದೇ ತೊಂದರೆಗಳಾಗದಂತೆ ನೋಡಿಕೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.